Home ನಮ್ಮ ರಾಜ್ಯ ನಟ ಅಂಬರೀಶ್ ಸ್ಮರಣಾರ್ಥ "ಅಂಬಿ ಅಮರ" ದೇವಸ್ಥಾನ ನಿರ್ಮಿಸಿದ ಈ ಗ್ರಾಮ!

ನಟ ಅಂಬರೀಶ್ ಸ್ಮರಣಾರ್ಥ “ಅಂಬಿ ಅಮರ” ದೇವಸ್ಥಾನ ನಿರ್ಮಿಸಿದ ಈ ಗ್ರಾಮ!

ಮಂಡ್ಯ: ಎಂಟು ಲಕ್ಷ ರೂ. ನಿಧಿ ಸಂಗ್ರಹದ ಮೂಲಕ ‘ಅಂಬಿ ಅಮರ’ ದೇವಾಲಯ ನಿರ್ಮಿಸುವ ಮೂಲಕ ಮೆಚ್ಚಿನ ನಟನಿಗೆ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದ್ದು, ಅವರ ಎರಡನೇ ಪುಣ್ಯ ಸ್ಮರಣೆ ದಿನವಾದ ನವೆಂಬರ್ 24 ರಂದು ಅನಾವರಣ ಮಾಡಲಾಗುತ್ತಿದೆ.

- Advertisement -

”ನಾನು ಮಾತ್ರವಲ್ಲ, ನನ್ನ ತಂದೆ, ಗ್ರಾಮದಲ್ಲಿರುವ ಎಲ್ಲಾ ಸಂಬಂಧಿಕರು ಅಂಬರೀಶ್ ಅವರ ಅಭಿಮಾನಿಗಳು. ಅವರು ನಮ್ಮ ಹಳ್ಳಿಯಲ್ಲಿ ಮಾಡಿದ ಜನಪರ ಕಾರ್ಯಗಳಿಂದ ಜನರ ಜೀವನ ಬದಲಾಗಿದ್ದು, ದೇವರಂತೆ ನಂಬಿಕೆ ಇಡಲಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಅಂಬಿ ಫೋಟೋವಿದೆ. ಗ್ರಾಮಸ್ಥರು, ಅಭಿಮಾನಿಗಳಗಳ ಪ್ರಯತ್ನದಿಂದ ಇದೀಗ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಹೊಟ್ಟೆಗೌಡನದೊಡ್ಡಿ ನಿವಾಸಿ ಸಿದ್ದೇಶ್ ಸಂತಸ ವ್ಯಕ್ತಪಡಿಸಿದರು.

- Advertisement -

ರೆಬೆಲ್ ಸ್ಟಾರ್ ಅಂಬರೀಷ್ ಭೌತಿಕವಾಗಿ ನಮ್ಮನ್ನು ಅಗಲಿ ಎರಡು ವರ್ಷ ಆಗಿದ್ದರೂ ಜನಮಾನಸದಲ್ಲಿ ಅವರು ಎಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅವರ ಮೇಲಿನ ಪ್ರೀತಿ, ಅಭಿಮಾನ ಜನರಲ್ಲಿ ಹಾಗೆಯೇ ಇದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ.

- Advertisement -
- Advertisment -

Most Popular