ಭೋಪಾಲ: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ವಿಡಿಯೊ ಚಿತ್ರೀಕರಿಸಿ, ಹರಿಬಿಟ್ಟವರು ರಾವಣರು ಎಂದಿರುವ ಸಂಸದೆ ಸಾದ್ವಿ, ಅವರ ವೃದ್ಧಾಪ್ಯ ಮತ್ತು ಮುಂದಿನ ಜನ್ಮ ಹಾಳಾಗಿ ಹೋಗುತ್ತದೆ ಎಂದು ಶಪಿಸಿದ್ದಾರೆ.
ತಮ್ಮ ಸಹಾಕಯರ ನೆರವಿನೊಂದಿಗೆ, ದೀರ್ಘ ಕಾಲದಿಂದಲೂ ವ್ಹೀಲ್ ಚೇರ್ ಮೇಲೆ ಕುಳಿತೇ ಸಂಚರಿಸುವ ಪ್ರಜ್ಞಾ ಅವರು ಕಬಡ್ಡಿ ಆಡುತ್ತಿರುವ ವಿಡಿಯೊ ಎಲ್ಲರಲ್ಲೂ ಆಶ್ಚರ್ಯ ಮೂಡಿಸಿತ್ತು. ಇದಕ್ಕೂ ಮೊದಲು ಅವರು ಬಾಸ್ಕೆಟ್ ಬಾಲ್ ಆಡಿದ ವಿಡಿಯೊ ಮತ್ತು ನರ್ತಿಸಿದ ವಿಡಿಯೊಗಳೂ ವೈರಲ್ ಆಗಿದ್ದವು.