Home ನಮ್ಮ ರಾಜ್ಯ ನಾಳೆ ಡಿಕೆಶಿ ಪುತ್ರಿ ಐಶ್ವರ್ಯಾ ಮತ್ತು ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ

ನಾಳೆ ಡಿಕೆಶಿ ಪುತ್ರಿ ಐಶ್ವರ್ಯಾ ಮತ್ತು ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ.

- Advertisement -

ನಗರದ ಖಾಸಗಿ ಹೋಟೆಲ್ ನಲ್ಲಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗಡೆಯವರ ನಿಶ್ಚಿತಾರ್ಥ ನೆರವೇರಲಿದೆ.

- Advertisement -

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

- Advertisement -

ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಶ್ಚಿತಾರ್ಥ ಸಮಾರಂಭದಲ್ಲಿ ಎಸ್.ಎಂ.ಕೃಷ್ಣ ಕುಟುಂಬಸ್ಥರು ಹಾಗೂ ಡಿಕೆ.ಶಿವಕುಮಾರ್ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

- Advertisment -

Most Popular