ಮಂಗಳೂರು: ಕಿಡಿಗೇಡಿಗಳು ಗುಂಡು ಹಾರಿಸಿ ಬೀದಿ ನಾಯಿಯನ್ನು ಹತ್ಯೆಗೈದ ಅಮಾನವೀಯ ಘಟನೆ
ಮಂಗಳೂರು ನಗರದ ಶಿವಭಾಗ್ ಎಂಬಲ್ಲಿ ನಡೆದಿದೆ.
ಏರ್ ಗನ್ ಮೂಲಕ ನಾಯಿಯ ಹೊಟ್ಟೆಗೆ ಗುಂಡು ಹಾರಿಸಿದ್ದು ಅನಿಮಲ್ ಕೇರ್ ಟ್ರಸ್ಟ್ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ನಾಯಿಯ ದೇಹದಲ್ಲಿ ಬುಲೆಟ್ ಪತ್ತೆಯಾಗಿದೆ. ಈ ಬಗ್ಗೆ ಅನಿಮಲ್ ಕೇರ್ ಟ್ರಸ್ಟ್ ನ ಸುಮಾ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ನಾಯಿಯನ್ನು ಗುಂಡು ಹಾರಿಸಿ ಕೊಂದವರ ಬಂಧನಕ್ಕೆ ಆಗ್ರಹಿಸಿದ್ದಾರೆ.
- Advertisement -
ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.