Home ನಮ್ಮ ಕರಾವಳಿ ಕಣಿಯೂರು ಕ್ಷೇತ್ರ: ಚಪ್ಪರ ಮುಹೂರ್ತ

ಕಣಿಯೂರು ಕ್ಷೇತ್ರ: ಚಪ್ಪರ ಮುಹೂರ್ತ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಎಪ್ರಿಲ್ ೨೫ರಿಂದ-ಎ.೩೦ ತನಕ ನಡೆಯಲಿರುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಗುರುವಾರ ಶ್ರೀ ಮಹಾಬಲ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅನೆಯಾಲ ಮಂಟಮೆ, ಶ್ರೀ ಚಾಮುಂಡೇಶ್ವರಿ ದೇವಿ ಟ್ರಸ್ಟ್ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ಕಣಿಯೂರು, ಟ್ರಸ್ಟಿ ಸಂಜೀವ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ರಘುರಾಮ ಶೆಟ್ಟಿ ಕನ್ಯಾನ, ಕೋಶಾಧಿಕಾರಿ ಮೋನಪ್ಪ ಗೌಡ ಕನ್ಯಾನ, ನಾಗರಾಜ ಕಣಿಯೂರು, ದೀಕ್ಷಿತ್ ಕಣಿಯೂರು, ಚಿದಾನಂದ, ನಾನಾ ಸಮಿತಿಗಳ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು. ಚಪ್ಪರ ಮುಹೂರ್ತ ಕಾರ್ಯಕ್ರಮದ ಬಳಿಕ ಪೂರ್ವಸಿದ್ಧತಾ ಸಭೆ ನಡೆಯಿತು.

- Advertisement -
- Advertisement -
- Advertisement -
- Advertisment -

Most Popular