ಕೊಟ್ಟಯಂ: ಕೇರಳ ರಾಜ್ಯದಲ್ಲಿ ತೀವ್ರ ಮಳೆ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದು, ಹಲವಾರು ಮನೆಗಳು ನೆಲಸಮಗೊಂಡಿದೆ.
ಪತ್ತನಂತಟ್ಟಾ, ಕೊಟ್ಟಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, 7 ಜಿಲ್ಲೆಗಳಲ್ಲಿ ಓರೆಂಜ್ ಮತ್ತು ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟಗೆ 60 ಕಿ ಮೀ ವೇಗದಲ್ಲಿ ಗಾಳಿ, ಮಳೆಯಾಗುತ್ತಿದ್ದು, ಮೀನುಗಾರಿಕೆಯನ್ನು ನಿಷೇದಿಸಲಾಗಿದೆ.