ಮಂಗಳೂರು : ನಗರದ ಮಾರ್ಗನ್ಸ್ ಗೇಟ್ ಬಳಿ ಕಳೆದ ಕೆಲವು ದಿನಗಳ ಹಿಂದೆ ತಂದೆಯಿಂದಲೇ ಮಗನ ಮೇಲೆ ಶೂಟೌಟ್ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಮಗ ಸುಧೀಂದ್ರ ಮೃತಪಟ್ಟಿದ್ದಾನೆ.
ಶೂಟೌಟ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕಚೇರಿಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ.
ಈ ಘಟನೆ ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿದ್ದು, ಸೆರೆಯಾದ ದೃಶ್ಯವಳಿಗಳ ಪ್ರಕಾರ ಸಿಬ್ಬಂದಿ ಮೇಲಿನ ಕೋಪಕ್ಕೆ ತಂದೆಯೇ ಮಗನ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದುಬಂದಿದೆ.
ವೇತನದ ವಿಚಾರಕ್ಕೆ ನಿನ್ನೆ ಮಾಲೀಕ ರಾಜೇಶ್ ಪ್ರಭು ಬಳಿ ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದಾರೆ.
ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆದಿದೆ. ಆಗ ರಾಜೇಶ್ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ಹೊರಬಂದರು. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸಿದರು ಎನ್ನಲಾಗಿದೆ.