Home ನಮ್ಮ ಕರಾವಳಿ ಕಾವೂರಿನ ಮುಸ್ಲಿಮ್ ಸಹೋದರರಿಬ್ಬರ ಕೊಲೆ ಯತ್ನ ಪ್ರಕರಣ:ಆರೋಪಿಗಳ ಮೇಲೆ 307 ಪ್ರಕರಣ ದಾಖಲು: ಪಾಪ್ಯುಲರ್ ಫ್ರಂಟ್...

ಕಾವೂರಿನ ಮುಸ್ಲಿಮ್ ಸಹೋದರರಿಬ್ಬರ ಕೊಲೆ ಯತ್ನ ಪ್ರಕರಣ:
ಆರೋಪಿಗಳ ಮೇಲೆ 307 ಪ್ರಕರಣ ದಾಖಲು: ಪಾಪ್ಯುಲರ್ ಫ್ರಂಟ್ ಶ್ಲಾಘನೆ

ಮಂಗಳೂರು: ಕಾವೂರಿನಲ್ಲಿ ಮುಸ್ಲಿಮ್ ಸಹೋದರರಿಬ್ಬರ ಮೇಲೆ ಸಂಘಪರಿವಾರದ ಗೂಂಡಾಗಳು ಮಾರಣಾಂತಿಕ ವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕೊಲೆ ಯತ್ನ (307) ಅನ್ವಯ ಪ್ರಕರಣ ದಾಖಲಿಸಿರುವುದನ್ನು ಪಾಪ್ಯುಲರ್ ಫ್ರಂಟ್ ಮಂಗಳೂರು ಗ್ರಾಮಾಂತರ ಅಧ್ಯಕ್ಷ ನವಾಝ್ ಕಾವೂರು ಶ್ಲಾಘಿಸಿದ್ದಾರೆ.

- Advertisement -

ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಅಟ್ಟಹಾಸ ಮಿತಿ ಮೀರುತ್ತಿದ್ದು, ದಿನನಿತ್ಯ ಒಂದಿಲ್ಲೊಂದು ನೆಪವಾಗಿಟ್ಟುಕೊಂಡು ಬಿಜೆಪಿ- ಸಂಘಪರಿವಾರ ಕಾರ್ಯಕರ್ತರು ಮುಸ್ಲಿಮ್ ಯುವಕರ ಮೇಲೆ ದಾಳಿ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಲ್ಪಟ್ಟ ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದು, ಇನ್ನುಳಿದ ಅರೋಪಿಗಳನ್ನು ಕೂಡಲೇ ಬಂಧಿಸಬೇಕು. ಪೊಲೀಸ್ ಇಲಾಖೆ ಇಂತಹ ಕ್ರಿಮಿನಲ್ ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಜಿಲ್ಲೆಯ ಶಾಂತಿ, ಸೌಹಾರ್ದತೆ ಮತ್ತು ಏಕತೆಗೆ ಅಪಾಯಕಾರಿ ಯಾಗಿರುವ ಸಂಘಪರಿವಾರದ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಅಧ್ಯಕ್ಷ ನವಾಝ್ ಕಾವೂರು ಒತ್ತಾಯಿಸಿದ್ದಾರೆ.

- Advertisement -
- Advertisment -

Most Popular