Home ನಮ್ಮ ಕರಾವಳಿ ಮಂಗಳೂರು: ಶೃಂಗೇರಿಗೆ ತೆರಳಿದರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಂಗಳೂರು: ಶೃಂಗೇರಿಗೆ ತೆರಳಿದ
ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಂಗಳೂರು: ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಅ.8ರಂದು ಶೃಂಗೇರಿಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು.

- Advertisement -

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿಯವರೊಂದಿಗೆ ತೆರಳಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಬೀಳ್ಕೊಟ್ಟರು.

- Advertisement -
- Advertisment -

Most Popular