ಬೆಂಗಳೂರು: ನಿವೃತ್ತ ಡಿಜಿ & ಐಜಿಪಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಬ್ಯಾಂಕ್ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.
ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿ ಕಳ್ಳರು ವಂಚಿಸಿದ್ದಾರೆ. ನಿಮ್ಮ ಅಕೌಂಟ್ಗೆ ಪಾನ್ ಕಾರ್ಡ್ ಲಿಂಕ್ ಮಾಡಬೇಕು. ಲಿಂಕ್ ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿ ಒಟಿಪಿ ಪಡೆದು ಅಕೌಂಟ್ ನಲ್ಲಿದ್ದ 89 ಸಾವಿರ ರೂಪಾಯಿ ವಂಚನೆ ಮಾಡಿದ್ದಾರೆ. ಆಗ್ನೇಯ ವಿಭಾಗದ CEN ಠಾಣೆಗೆ ಶಂಕರ್ ಬಿದರಿ ದೂರು ನೀಡಿದ್ದಾರೆ. ಬಿದರಿ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.