Home ನಮ್ಮ ಕರಾವಳಿ ಕೊಣಾಜೆ: ನೇಣುಬಿಗಿದು ಯುವಕ ಆತ್ಮಹತ್ಯೆ

ಕೊಣಾಜೆ: ನೇಣುಬಿಗಿದು ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮೂಡಿಜೇರ ಸೈಟ್ ನಲ್ಲಿ ನಡೆದಿದೆ.

- Advertisement -

ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ.
ಪ್ಲಂಬರ್ ಆಗಿದ್ದ ಮಹೇಶ್ ಶೆಟ್ಟಿ ಅವಿವಾಹಿತರಾಗಿದ್ದಾರೆ. ಓರ್ವನೇ ಪುತ್ರನಾಗಿರುವ ಇವರು ಮನೆಮಂದಿಗೆ ಆಧಾರವಾಗಿದ್ದರು. ಇಬ್ಬರು ಸಹೋದರಿಯರು ವಿವಾಹಿತರಾಗಿದ್ದಾರೆ.

- Advertisement -

ತಾಯಿ ತನ್ನ ಸಹೋದರಿ ಮನೆಗೆ ತೆರಳಿದ್ದ ಸಂದರ್ಭ ಮಹೇಶ್ ಮನೆಯಲ್ಲಿ ಒಬ್ಬರೇ ಇದ್ದರು. ಸಂಜೆ ಗೆಳೆಯರ ಜೊತೆಗೆ ಕ್ರಿಕೆಟ್ ಆಟವಾಡಿ ಮನೆಗೆ ಬಂದಿದ್ದ ಮಹೇಶ್, ಗೆಳೆಯರಿಗೆ ವಾಟ್ಸ್ಯಾಪ್ ನಲ್ಲಿ ಫಾರ್ವರ್ಡ್ ಮೆಸೇಜ್ ಗಳನ್ನು ಮಾಡಿದ್ದರು. ಆದರೆ ಸಂಜೆ 7 ರ ನಂತರ ಫಿನಾಯಿಲ್ ಸೇವಿಸಿ, ಅರ್ಧ ದೋಸೆ ತಿಂದು ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಕೊಣಾಜೆ ಪೊಲೀಸರು ಅದನ್ನು ಅನ್ಲಾಕ್ ನಡೆಸಿದ ಬಳಿಕವಷ್ಟೇ ಕಾರಣ ತಿಳಿದುಬರಲಿದೆ ಎನ್ನುತ್ತಾರೆ ಮಹೇಶ್ ಆಪ್ತ ವಲಯ.

- Advertisement -
- Advertisment -

Most Popular