ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ರಮ್ಯಾ ಹೆಚ್.ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯೆ. ಆತ್ಮಹತ್ಯೆಗೆ ಸಾಂಸಾರಿಕ ಕಲಹ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ರಮ್ಯಾ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಗ್ರಾ.ಪಂ ಸದಸ್ಯೆ ರಮ್ಯಾಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಉಲ್ಬಣಿಸಿ ಕೊನೆಯುಸಿರೆಳೆದಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.