ತಮಿಳುನಾಡು: ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನೀಡಿರುವ ಜಾಹೀರಾತು ವಿವಾದಕ್ಕೆ ಕಾರಣವಾಗಿದೆ. ಉದ್ಯೋಗಕ್ಕಾಗಿ ನೀಡಿರುವ ಜಾಹೀರಾತಿನಲ್ಲಿ ಹಿಂದೂಗಳಿಗೆ ಮಾತ್ರ ಎಂದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜು ಆರಂಭವಾಗುತ್ತಿದ್ದು, ಬೋಧನೆ ಮತ್ತು ಬೋಧಕೇತರ ಸಿಬ್ಬಂದಿಗೆ ಅರ್ಜಿ ಆಹ್ವಾನಿಸಿರುವ ಇಲಾಖೆ, ಜಾಹೀರಾತಿನಲ್ಲಿ ‘ಹಿಂದೂಗಳಿಗೆ ಮಾತ್ರ’ ಎಂದು ಉಲ್ಲೇಖಿಸಿದ್ದು ವಿವಾದಕ್ಕೆ ಕಾರಣವಾಗಿದೆ.
ಧರ್ಮದ ಆಧಾರದ ಮೇಲೆ ಯಾರಾಗಿದಾರೂ ಅವಕಾಶಗಳನ್ನು ನಿರಾಕರಿಸುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಬೋಧಕರ ಸಂಘಗಳು ಹೇಳಿವೆ.
ಮಾನವ ಸಂಪನ್ಮೂಲ ಇಲಾಖೆ ಮತ್ತು ಸಿಇ ವಿಭಾಗವು 2021-22 ರಿಂದ ಕೊಲತ್ತೂರಿನಲ್ಲಿ ಕಪಾಲೀಶ್ವರರ್ ಕಾಲೇಜು ಸೇರಿದಂತೆ ನಾಲ್ಕು ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ.
ಅಕ್ಟೋಬರ್ 13 ರಂದು ಪ್ರಕಟವಾಗಿರುವ ಜಾಹೀರಾತಿನಲ್ಲಿ, ಬಿಕಾಂ, ಬಿಬಿಎ, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಸಿಎ, ತಮಿಳು, ಇಂಗ್ಲಿಷ್, ಗಣಿತ ಕೋರ್ಸ್ಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮತ್ತು ದೈಹಿಕ ನಿರ್ದೇಶಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.